150 ಕೋಟಿ ಗಣಿ ಕಪ್ಪ. ಮೂರು ವಾರದಲ್ಲಿ ಸಾಕ್ಷ್ಯ ಸಲಿಸುತ್ತೆನೆ-ಜನಾರ್ದನ ರೆಡ್ಡಿ

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಮಾಡಿರುವ ರೂ.150 ಕೋಟಿ ಗಣಿ ಕಪ್ಪದ ಆರೋಪಕ್ಕೆ ಸಂಬಂಧಿಸಿದಂತೆ ಮೂರುವ ವಾರಗಳಲ್ಲಿ ವಿಶೇಷ ತನಿಖಾ ಸಂಸ್ಥೆಗೆ ಸಾಕ್ಷ್ಯ ಸಲ್ಲಿಕೆ ಮಾಡುತ್ತೇನೆಂದು ಬಳ್ಳಾರಿ ಗಣಿ ಧಣಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಶುಕ್ರವಾರ ಹೇಳಿದ್ದಾರೆ. 
ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ಸಂಸ್ಥೆ ಸೂಚನೆ ಮೇರೆಗೆ ತನಿಖಾಧಿಕಾರಿಗಳ ಮುಂದೆ ನಿನ್ನೆ ವಿಚಾರಣೆಗೆ ಹಾಜರಾಗಿದ್ದ ರೆಡ್ಡಿ ಅವರು, ತಮ್ಮ ಆರೋಪಕ್ಕೆ ಪೂರಕ ದಾಖಲೆ ನೀಡಲು ಸಮಯಬೇಕು ಎಂಬ ಮನವಿ ಮುಂದಿಟ್ಟರು. ಇದನ್ನು ಪುರಸ್ಕರಿಸಿದ ಅಧಿಕಾರಿಘಳು ಸಮಯ ನೀಡಿದ್ದಾರೆ ಎಂದು ತಿಳಿದುಬಂದಿದೆ. 
ಹೀಗಾಗಿ ಸುಮಾರು 10 ವರ್ಷಗಳ ಹಿಂದಿನ ಈ ಪ್ರಕರಣ ಕುರಿತು ಜನಾರ್ದನರೆಡ್ಡಿ ಯಾವೆಲ್ಲಾ ಸಾಕ್ಷ್ಯಗಳನ್ನು ಒದಗಿಸುತ್ತಾರೆಂಬ ಕುತೂಹಲ ರಾಜ್ಯ ರಾಜಕಾರಣದಲ್ಲಿ ತೀವ್ರವಾಗಿದೆ. ಹೆಬ್ಬಾಳದ ಜಿಕೆವಿಕೆ ಆವರಣದಲ್ಲಿರುವ ಎಸ್ಐಟಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಹೊರ ಬಂದು ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿಯವರು, ಗಣಿಕಪ್ಪ ಆರೋಪದ ಸಿಡಿ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಪ್ರಶ್ನಿಸಲಿಲ್ಲ. ಆದರೆ, ನನ್ನ ಆರೋಪಕ್ಕೆ ಸಂಬಂಧಿದಂತೆ ಸಾಕ್ಷ್ಯಾಧಾರಗಳ ಮಾಹಿತಿ ಕೇಳಿದ್ದಾರೆ. ಈ ಮಾಹಿತಿ ನೀಡಲು ನಾನು ಸಮಯ ಪಡೆದಿದ್ದೇನೆ ಎಂದರು.
3 ವಾರಗಳಲ್ಲಿ ನನ್ನ ಆರೋಪಕ್ಕೆ ಸಾಕ್ಷ್ಯಾಧಾರಗಳನ್ನು ತನಿಖಾ ತಂಡಕ್ಕೆ ಸಲ್ಲಿಕೆ ಮಾಡುತ್ತೇನೆ. ಪ್ರಕರಣದ ತನಿಖೆಗೆ ಸ್ಪಂದಿಸುತ್ತೇನೆಂದು ತಿಳಿಸಿದರು. 
2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ವಿಧಾನಪರಿಷತ್ ಸದಸ್ಯರಾಗಿದ್ದ ಜನಾರ್ದನ ರೆಡ್ಡಿಯವರು, ವಿಧಾನಸಭಾ ಅಧಿವೇಶನದಲ್ಲೇ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಅರಣ್ಯ ಸಚಿವ ಸಿ.ಚನ್ನಿಗಪ್ಪ ವಿರುದ್ಧ ಬಳ್ಳಾರಿ ಗಣಿ ಮಾಲೀಕರಿಂದ ಹಣ ಸಂಗ್ರಹಿಸಿದ್ದಾರೆಂದು ಆರೋಪಿಸಿದ್ದರು. ಆರೋಪ ಹಿನ್ನಲೆಯಲ್ಲಿ ಎಸ್ಐಟಿ ರೆಡ್ಡಿಯವರಿಗೆ ನೋಟಿಸ್ ಜಾರಿ ಮಾಡಿತ್ತು. 

No comments:

Post a Comment

Featured Post

ಪ್ರಿಯಾಂಕ ಗಾಂಧಿಗೆ ಕರ್ನಾಟಕ ಚುನಾವಣಾ ಜವಾಬ್ದಾರಿ...!

ಮುಂದಿನ ವರ್ಷ ಕರ್ನಾಟಕ, ರಾಜಸ್ಥಾನದಲ್ಲಿ ಚುನಾವಣೆ ನಡೆಯಲಿದ್ದು, ಈ ಎರಡು ರಾಜ್ಯಗಳ ಚುನಾವಣೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವವಾಗಿದೆ. ಚುನಾವಣೆಯಲ್ಲಿ ಗೆಲುವು ಪಡೆಯುವ ದೃ...